ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಜಿಲ್ಲಾಧಿಕಾರಿ ಶಿವಮೂರ್ತಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಜೈಲಿನಲ್ಲಿರುವ ಆಸ್ಪತ್ರೆ ಚಿಕ್ಕದಾಗಿದೆ. ಕೈದಿಗಳಿಗೆ ಚಿಕಿತ್ಸೆ ನೀಡಲು ಹೊರಗಿನ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದ ಸ್ಥಿತಿ ಇದೆ. ಆಸ್ಪತ್ರೆ ವಿಸ್ತರಣೆಗೆ ಕ್ರಮ ಕೈಗೊಳ್ಳಿ’ ಎಂದು ಜೈಲಿನ ಅಧಿಕಾರಿಗಳು ಜಿಲ್ಲಾಧಿಕಾರಿ ಅವರನ್ನು ಕೋರಿದರು. ಜಿಲ್ಲಾಧಿಕಾರಿ, ‘ವರದಿ ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಿ. ಸರ್ಕಾರಕ್ಕೆ ಸಲ್ಲಿಸೋಣ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.