ADVERTISEMENT

ಬೆಂಗಳೂರು | ಬೈಕ್‌ ಸವಾರರ ಅಡ್ಡಗಟ್ಟಿ ಸುಲಿಗೆ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 16:33 IST
Last Updated 13 ಜುಲೈ 2024, 16:33 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಬೈಕ್‌ ಸವಾರರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲ್ಕೆರೆ ನಿವಾಸಿ ಮುರುಗನ್(33), ದೊಡ್ಡ ಬಾಣಸವಾಡಿ ನಿವಾಸಿ ಅನಿಲ್ ಕುಮಾರ್(31) ಮತ್ತು ಕಲ್ಕೆರೆ ನಿವಾಸಿ ತೇಜಸ್(25) ಬಂಧಿತರು.

ADVERTISEMENT

ಆರೋಪಿಗಳಿಂದ ಮೊಬೈಲ್, 1 ವಾಚ್ ಹಾಗೂ ನಗದು ಜಪ್ತಿ ಮಾಡಲಾಗಿದೆ. ಅವುಗಳ ಮೌಲ್ಯ ಸುಮಾರು ₹ 70 ಸಾವಿರ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 7ರ ತಡರಾತ್ರಿ ದೂರುದಾರರು ತಮ್ಮ ಸ್ನೇಹಿತನ ಜಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಆಗ ಆರೋಪಿಗಳು ಅಡ್ಡಗಟ್ಟಿ ಅವರ ಬಳಿಯಿದ್ದ ವಾಚ್, ಮೊಬೈಲ್ ಮತ್ತು ಫೋನ್ ಪೇ ಮೂಲಕ ₹3,700 ಅನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.

ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.