ಬೆಂಗಳೂರು: ಇನ್ಫೊಸಿಸ್ ಫೌಂಡೇಷನ್ ಪ್ರಾಯೋಜಕತ್ವದಲ್ಲಿ ಪಾವಗಡದಲ್ಲಿ ನಿರ್ಮಾಣ ಆಗಿರುವ ಶಾರದಾ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಸಂಕೀರ್ಣದ ಉದ್ಘಾಟನೆ ಸೆ.4ರಂದು ನಡೆಯಲಿದೆ.
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ವೆಬಿನಾರ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಆರೋಗ್ಯ ಸಚಿವ ಕೆ. ಸುಧಾಕರ್, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಂಸದ ಡಿ.ಕೆ. ಸುರೇಶ್ ಭಾಗವಹಿಸಲಿದ್ದಾರೆ ಎಂದು ಶಾರದಾದೇವಿ ಕಣ್ಣಿನ ಆಸ್ಪತ್ರೆಯ ರಜತ ಮಹೋತ್ಸವ ಸಮಿತಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.