ಹೊಸಪೇಟೆ: ಶಾಸಕ ಆನಂದ್ ಸಿಂಗ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಕಿಶೋರ್ ಎಂಬುವರ ವಿರುದ್ಧ ಇಲ್ಲಿನ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಆನಂದ್ ಸಿಂಗ್ ಬೆಂಬಲಿಗ ಆ್ಯಂಥೋನಿ ದಾಸ್ ಮಂಗಳವಾರ ಠಾಣೆಗೆ ದೂರು ಕೊಟ್ಟಿದ್ದರು.
'ದಾಸ್ ಅವರು 'ಆನಂದ್ ಸಿಂಗ್ ಆರ್ಮಿ' ಹೆಸರಿನ ಫೇಸ್ ಬುಕ್ ಖಾತೆ ಹೊಂದಿದ್ದಾರೆ. ಅದರಲ್ಲಿ ಸಿಂಗ್ ಅವರ ಸಾಧನೆ, ಕೆಲಸಗಳನ್ನು ಅವರು ಪೋಸ್ಟ್ ಮಾಡುತ್ತಾರೆ. ಅದನ್ನು ಪ್ರಶ್ನಿಸಿ, ಕಿಶೋರ್ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದಾರೆ. ಅವರ ವಿರುದ್ಧ ದೂರು ಕೊಟ್ಟಿರುವುದರಿಂದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸ್ ಅಧಿಕಾರಿ 'ಪ್ರಜಾವಾಣಿ'ಗೆ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.