ಬೆಂಗಳೂರು: ‘ಐಪಿಎಸ್ ಅಧಿಕಾರಿ’ ಎಂದು ಹೇಳಿಕೊಂಡು ಉದ್ಯಮಿಯಿಂದ ಹಣ ಕಿತ್ತುಕೊಳ್ಳಲು ಯತ್ನಿಸಿದ ಆರೋಪದಲ್ಲಿ ಭರತ್ಕುಮಾರ್ (48) ಎಂಬಾತನನ್ನು ಸಿದ್ಧಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಲಾಲ್ಬಾಗ್ನಲ್ಲಿ ಡಿ.14ರಂದು ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದ ಉದ್ಯಮಿ ಭೀಮ್ ಚಂದ್ ಎಂಬುವವರನ್ನು ಅಡ್ಡಗಟ್ಟಿದ್ದ ಆರೋಪಿ ಭರತ್, ತಾನು ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ, ‘₹ 1 ಲಕ್ಷ ನೀಡದಿದ್ದರೆ ಸುಳ್ಳು ಕೇಸ್ನಲ್ಲಿ ನಿನ್ನ ಮಗ ಹಾಗೂ ನಿನಗೆ ಪಾಠ ಕಲಿಸುತ್ತೇನೆ’ ಎಂದು ಬೆದರಿಸಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.