ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಎಂಬುದಾಗಿ ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಆರೋಪದಡಿ ಅನಿಲ್ ಕುಲಕರ್ಣಿ ಎಂಬಾತನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
‘ಪೊಲೀಸ್ ಇಲಾಖೆಗೆ ಸೇರಲು ಪ್ರಯತ್ನಿಸುತ್ತಿದ್ದ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಪಿಎಸ್ಐ ಹಾಗೂ ಕಾನ್ಸ್ಟೆಬಲ್ ಕೆಲಸ ಕೊಡಿಸುವ ಭರವಸೆ ನೀಡುತ್ತಿದ್ದ. ಅವರಿಂದ ಹಣ ಪಡೆದು ಪರಾರಿಯಾಗುತ್ತಿದ್ದ. ಆತನಿಂದ ₹ 1.30 ಲಕ್ಷ ಕಳೆದುಕೊಂಡಿದ್ದ ಅಭ್ಯರ್ಥಿಗಳಿಬ್ಬರು ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಪೊಲೀಸರ ಖಾಕಿ ಪ್ಯಾಂಟ್ ಹಾಗೂ ಹೆಲ್ಮೆಟ್ ಧರಿಸಿಕೊಂಡು ಆರೋಪಿ ಸುತ್ತಾಡುತ್ತಿದ್ದ. ಪಿಎಸ್ಐ ಸೋಗಿನಲ್ಲಿ ಹಲವರನ್ನು ಬೆದರಿಸಿ ಹಣವನ್ನೂ ಪಡೆಯುತ್ತಿದ್ದನೆಂಬುದು ಗೊತ್ತಾಗಿದೆ’ ಎಂದೂ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.