ADVERTISEMENT

ಹೆಸರಘಟ್ಟದಲ್ಲಿ ಬಿತ್ತನೆ ಬೀಜ ಪೂರೈಕೆಗೆ ರೈತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 20:24 IST
Last Updated 13 ಜೂನ್ 2020, 20:24 IST

ಹೆಸರಘಟ್ಟ: ‘ರೈತರಿಗೆ ಒಂದು ಎಕರೆ ಪ್ರದೇಶಕ್ಕೆ 12 ಕೆಜಿಯಿಂದ 15 ಕೆ.ಜಿ.ಬಿತ್ತನೆ ಬೀಜ ಬೇಕಾಗುತ್ತದೆ. ಆದರೆ ಸರ್ಕಾರವು ಕೇವಲ 5 ಕೆ.ಜಿ. ಬಿತ್ತನೆ ಬೀಜವನ್ನು ನೀಡುತ್ತಿದೆ. ಬಿಜೆಪಿ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಅಗತ್ಯ ಪ್ರಮಾಣದ ಬಿತ್ತನೆ ಬೀಜವನ್ನು ನೀಡಲಿ’ ಎಂದು ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ವಿ.ಅರ್.ನಾರಾಯಣ ರೆಡ್ಡಿ ಆಗ್ರಹಿಸಿದರು.

ಹೆಸರಘಟ್ಟದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಕುರಿತು ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಎಂದರು.

‘ಆಯಾ ಜಿಲ್ಲಾ ವ್ಯಾಪ್ತಿಯ ಬೆಳೆಗಳಿಗೆ ಅನುಗುಣವಾಗಿ ಬಿತ್ತನೆ ಬೀಜವನ್ನು ವಿತರಿಸಬೇಕು. ರೈತರಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜವನ್ನು ವಿತರಣೆ ಮಾಡುವಂತೆ ಸಚಿವರಿಗೆ ಮನವಿ ಪತ್ರವನ್ನು ನೀಡಲಾಗಿದೆ’ ಎಂದು ಅವರು ತಿಳಿಸಿದರು.

ADVERTISEMENT

‘ಇಪ್ಪತ್ತು ಕುಂಟೆ ಭೂಮಿಯಲ್ಲಿ ಕೃಷಿ ಮಾಡುವ ಸಣ್ಣ ರೈತರಿಗೆ ಬಿತ್ತನೆ ಬೀಜ ನೀಡುವುದಿಲ್ಲ. ಅಧಿಕಾರಿಗಳನ್ನು ಕೇಳಿದರೆ ಕಂಪ್ಯೂಟರ್ ದಾಖಲೆಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳುತ್ತಾರೆ. ಹಾಗಾದರೆ ಸಣ್ಣ ರೈತ ಎಲ್ಲಿಗೆ ಹೋಗಬೇಕು’ ಎಂದು ಪ್ರಶ್ನಿಸಿದ ಅವರು, ‘ಈ ಕೂಡಲೇ ಸಣ್ಣ ಹಿಡುವಳಿದಾರರಿಗೂ ಬಿತ್ತನೆ ಬೀಜವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸಮಿತಿ ಸದಸ್ಯರಾದ ಹರೀಶ್,ಮಂಜುನಾಥ್ ಹೊಸಕೋಟೆ ಮತ್ತು ರಾಮಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.