ಬೆಂಗಳೂರು: ಆಕಾಶವಾಣಿಯಿಂದ ‘ಪರೀಕ್ಷಾ ಸಿದ್ಧತೆ’ ಬಾನುಲಿ ಪಾಠ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವಂತೆ ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಗುರುವಾರಸೂಚನೆ ನೀಡಿದ್ದಾರೆ.
‘ಪ್ರಜಾವಾಣಿ’ಯಲ್ಲಿ ಗುರುವಾರ ಈ ಸಂಬಂಧ ವರದಿ ಪ್ರಕಟವಾಗಿತ್ತು. ಶೀಘ್ರ ಅಧಿಕೃತ ಆದೇಶ ಹೊರಬೀಳಲಿದ್ದು, ಮಾರ್ಚ್ ತಿಂಗಳಲ್ಲಿ ಬಾನುಲಿ ಪ್ರಸಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.