ADVERTISEMENT

ಬೆಂಗಳೂರು: ಮಹಿಳೆಯ ಜೊತೆ ತಂದೆ ಸಲುಗೆ, ಬೇಸತ್ತು ಮಗ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 21:20 IST
Last Updated 20 ಆಗಸ್ಟ್ 2022, 21:20 IST
   

ಬೆಂಗಳೂರು: ಜಗಜೀವನ್‌ ರಾಮ್ ನಗರ ಠಾಣೆ ವ್ಯಾಪ್ತಿಯಲ್ಲಿ ಚಂದು (19) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

‘ಸ್ಥಳೀಯ ನಿವಾಸಿ ಚಂದು, ಶುಕ್ರವಾರ ರಾತ್ರಿ ಕೊಠಡಿಗೆ ಹೋಗಿ ಮಲಗಿದ್ದರು. ಶನಿವಾರ ಬೆಳಿಗ್ಗೆ ಬಾಗಿಲು ತೆರೆದಿರಲಿಲ್ಲ.ಅನುಮಾನಗೊಂಡು ಬಾಗಿಲು ಮೀಟಿ ತೆಗೆದು ನೋಡಿದಾಗ, ಮೃತ ದೇಹ ಕಂಡಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಚಂದು ಅವರ ತಂದೆ, ಮಹಿಳೆಯ ಜೊತೆ ಸಲುಗೆ ಇಟ್ಟುಕೊಂಡಿದ್ದರೆಂದು ಎನ್ನಲಾಗಿದೆ. ಇದರಿಂದ ಸಿಟ್ಟಾಗಿದ್ದ ಚಂದು, ತಂದೆಗೆ ಮಹಿಳೆ ಬಳಿ ಹೋಗದಂತೆ ತಾಕೀತು ಮಾಡಿ ದ್ದರು. ಇದೇ ವಿಚಾರವಾಗಿ ಶುಕ್ರವಾರ ರಾತ್ರಿ ತಂದೆ–ಮಗನ ನಡುವೆ ಗಲಾಟೆ ಆಗಿತ್ತು. ಇದರಿಂದ ಬೇಸತ್ತು ಚಂದು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ. ಪ್ರಕರಣ ದಾಖ ಲಾಗಿದ್ದು, ತನಿಖೆ ಮುಂದುರಿದಿದೆ’ ಎಂದೂ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.