ADVERTISEMENT

ಬೆಂಗಳೂರು: ₹50 ಸಾವಿರ ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 19:31 IST
Last Updated 9 ನವೆಂಬರ್ 2022, 19:31 IST
ಸುಮಂತ್
ಸುಮಂತ್   

ಬೆಂಗಳೂರು: ನಿವೃತ್ತಿ ವೇತನ ಮಂಜೂರು ಮಾಡುವ ಕಡತ ವರ್ಗಾಯಿಸಲು ₹50 ಸಾವಿರ ಲಂಚ ಪಡೆಯುತ್ತಿದ್ದ ಆರೋಗ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕ ಸುಮಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನಿವೃತ್ತಿ ವೇತನ ಮಂಜೂರು ಮಾಡುವ ಕಡತವನ್ನು ತಮ್ಮ ಕಚೇರಿಯಿಂದ ಅಕೌಂಟೆಂಟ್ ಜನರಲ್ ಕಚೇರಿಗೆ ವರ್ಗಾಯಿಸಲು ₹50 ಸಾವಿರ ಲಂಚಕ್ಕೆ ಸುಮಂತ್ ಬೇಡಿಕೆ ಇಟ್ಟಿದ್ದರು. ಮಾಗಡಿ ರಸ್ತೆಯಲ್ಲಿನ ಆರೋಗ್ಯ ಭವನದಲ್ಲಿ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿ ಬಂಧಿಸಲಾಗಿದೆ. ಮುಖ್ಯ ಆಡಳಿತಾಧಿಕಾರಿ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ನಿವೃತ್ತ ಸಹಾಯಕ ಆಡಳಿತಾಧಿಕಾರಿ ಸಂಗನ ಬಸಪ್ಪ ಕಲ್ಲಪ್ಪ ಕೊರಬು ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಲೋಕಾಯುಕ್ತ ಪೊಲೀಸರು ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.