ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 31 ಜ್ವರ ಚಿಕಿತ್ಸಾ ಕೇಂದ್ರಗಳಿಗೆ ಚಿಕಿತ್ಸೆ ಸಲುವಾಗಿ ಬುಧವಾರ ಬಂದಿದ್ದ ಎಂಟು ಮಂದಿ ಕೊರೊನಾ ಸೋಂಕು ಹೊಂದಿರುವ ಶಂಕೆ ಇದ್ದು, ಹೆಚ್ಚಿನ ಸೌಲಭ್ಯವುಳ್ಳ ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗುವಂತೆ ಅವರಿಗೆ ಶಿಫಾರಸು ಮಾಡಲಾಗಿದೆ.
ಈ ಪೈಕಿ ನಾಲ್ವರು ನವದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದಿದ್ದ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು ಎಂದು ಬಿಬಿಎಂಪಿ ತಿಳಿಸಿದೆ. ಚಿಕಿತ್ಸೆ ಬಂದ ಆರು ಮಂದಿಗೆ ಸಿ.ವಿ.ರಾಮನ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.