ADVERTISEMENT

ಕುಸಿದ ಆರ್ಥಿಕ ಸ್ಥಿತಿ: ಮಲ್ಲಿಕಾರ್ಜುನ ಖರ್ಗೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2019, 9:06 IST
Last Updated 3 ಸೆಪ್ಟೆಂಬರ್ 2019, 9:06 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಬೆಂಗಳೂರು: ದೇಶದ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿದ್ದು, ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದವರನ್ನು ಆರ್‌ಬಿಐ ಗವರ್ನರ್ ಮಾಡಿ ಕೂರಿಸಲಾಗಿದೆ. ದಿನದಿಂದ ದಿನಕ್ಕೆ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಾಪ್ರಹಾರ ನಡೆಸಿದ್ದಾರೆ.

ಏನು ಮಾಡಿದರೂ ನಡೆಯುತ್ತದೆ ಎಂಬ ನಿಲುವನ್ನು ಮೋದಿ ತಾಳಿದಂತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ದೇಶ ದಿವಾಳಿಯತ್ತ ಹೆಜ್ಜೆ ಹಾಕಲಿದೆ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT