ಬೆಂಗಳೂರು: 41 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಬೈಕ್ ಸವಾರರೊಬ್ಬರಿಗೆ ₹ 20 ಸಾವಿರ ದಂಡ ವಿಧಿಸಲಾಗಿದೆ.
‘ಜೀವನ್ಬಿಮಾನಗರ ಸಂಚಾರ ಠಾಣೆ ಎಎಸ್ಐ ರಾಮಚಂದ್ರೇಗೌಡ, ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅದೇ ವೇಳೆ ಸ್ಥಳಕ್ಕೆ ಬಂದಿದ್ದ ಬೈಕ್ ಸವಾರರೊಬ್ಬರನ್ನು ತಡೆದು ತಪಾಸಣೆ ನಡೆಸಿದ್ದರು. ಅವರು 41 ಬಾರಿ ನಿಯಮ ಉಲ್ಲಂಘಿಸಿದ್ದು ಗೊತ್ತಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಬೈಕ್ ಜಪ್ತಿ ಮಾಡಿದ ಎಎಸ್ಐ, ಸವಾರರಿಗೆ ದಂಡ ರಶೀದಿ ನೀಡಿದರು. ನಿಯಮದಂತೆ, ಸಂಚಾರ ನಿಯಮಗಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಬೈಕ್ ಬಿಡುಗಡೆ ಮಾಡಲಾಗುವುದು’ ಎಂದೂ ತಿಳಿಸಿವೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.