ADVERTISEMENT

ಅವಹೇಳನಕಾರಿ ಹೇಳಿಕೆ: ನಟ ಚೇತನ್ ವಿರುದ್ಧ ಎಫ್ಐಆರ್

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 19:39 IST
Last Updated 22 ಅಕ್ಟೋಬರ್ 2022, 19:39 IST
   

ಬೆಂಗಳೂರು: 'ಕಾಂತಾರ ಸಿನಿಮಾ ಕುರಿತು ಮಾತನಾಡುವ ವೇಳೆ ದೈವಾರಾಧನೆ ಕುರಿತು ಅವಹೇಳನಕಾರಿ ಹೇಳಿಕೆ‌ ನೀಡಿದ್ದ' ಆರೋಪದಡಿ ನಟ ಚೇತನ್ ವಿರುದ್ಧ ಶೇಷಾದ್ರಿಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

'ಶಿವಕುಮಾರ್ ಎಂಬುವರು ನೀಡಿದ್ದ ದೂರು ಆಧರಿಸಿ ಆರೋಪಿ ಚೇತನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗೆ ನೋಟಿಸ್ ನೀಡಿ‌ ವಿಚಾರಣೆ ನಡೆಸಲಾಗುವುದು' ಎಂದು ಪೊಲೀಸರು ಹೇಳಿದರು.

'ಶೇಷಾದ್ರಿಪುರ ಠಾಣೆ ವ್ಯಾಪ್ತಿಯಲ್ಲಿ ಚೇತನ್ ವಾಸವಿದ್ದಾರೆ. ಜಾತಿ-ಧರ್ಮಗಳ ನಡುವೆ‌ ವೈಷಮ್ಯ‌ ಮೂಡಿಸುವ ಉದ್ದೇಶದಿಂದ ಇತ್ತೀಚೆಗೆ ಅವರು ಹೇಳಿಕೆ‌ ನೀಡಿದ್ದಾರೆ. ಧಾರ್ಮಿಕ‌ ನಂಬಿಕೆಗೆ ಧಕ್ಕೆ ತಂದಿದ್ದಾರೆ' ಎಂದು ದೂರಿ‌ನಲ್ಲಿ ಶಿವಕುಮಾರ್ ‌ಆರೋಪಿಸಿದ್ದಾರೆ. ದೂರಿಗೆ ಸಂಬಂಧಪಟ್ಟ ಕೆಲ ಪುರಾವೆಗಳನ್ನು ನೀಡಿದ್ದಾರೆ' ಎಂದು ಪೊಲೀಸರು ತಿಳಿಸಿದರು.

ADVERTISEMENT

ಪ್ರತಿಭಟನೆ ನಡೆಸಿದ್ದವರ ಬಂಧನ: ಹೇಳಿಕೆ ಖಂಡಿಸಿ ಚೇತನ್ ಮನೆ ಎದುರು ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ್ದರು. ಅವರನ್ನು ಪೊಲೀಸರು ವಶಕ್ಕೆ ಪಡೆದು, ಬಿಡುಗಡೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.