ADVERTISEMENT

ಕಾಟನ್‌ಪೇಟೆಯಲ್ಲಿ ಅಗ್ನಿ ದುರಂತ: ಇಬ್ಬರ ದುರ್ಮರಣ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2019, 4:40 IST
Last Updated 21 ಅಕ್ಟೋಬರ್ 2019, 4:40 IST
   

ಬೆಂಗಳೂರು: ಕಾಟನ್‌ಪೇಟೆಯಭಕ್ಷಿ ಗಾರ್ಡನ್‌ನಲ್ಲಿಸೋಮವಾರ ನಸುಕಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾವೇರಿ (21) ಮತ್ತು ಶ್ರೀಕಾಂತ್ (13)ಮೃತರು. ಗಂಭೀರ ಸ್ಥಿತಿಯಲ್ಲಿರುವ ಪತಿ ಮುರಳಿ ಮತ್ತು ಪತ್ನಿ ಗೀತಾ ಅವರನ್ನುವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದಾಗಿದುರಂತ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಕಾಟನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.