ಕೆ.ಆರ್.ಪುರ: ಹೊರಮಾವು ಸಮೀಪದ ಬಂಜಾರ ಬಡಾವಣೆಯ ಪ್ಲಾನ್ ಶೆ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು, ಗೃಹ ಪೀಠೋಪಕರಣ ತಯಾರಿಸುವ ಕಚ್ಚಾ ವಸ್ತುಗಳು ಭಸ್ಮವಾಗಿವೆ.
ಲೀನಾ ಎಂಬುವವರಿಗೆ ಸೇರಿದ ಪ್ಲಾನ್ ಶೆ ಗೋದಾಮಿನಲ್ಲಿ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಈ ಅವಘಡ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲೈವುಡ್, ಪ್ಲೋರ್ ಮ್ಯಾಟ್, ಹಾರ್ಡ್ ವೇರ್ ಉತ್ಪನ್ನಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಗೋದಾಮಿನಲ್ಲಿ ಯಾರೂ ಇರಲಿಲ್ಲ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಐದು ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಸತತ ಐದು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.