ADVERTISEMENT

ಆಸ್ಪತ್ರೆಯಲ್ಲಿ ಬೆಂಕಿ; ರೋಗಿಗಳ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 20:20 IST
Last Updated 10 ಫೆಬ್ರುವರಿ 2020, 20:20 IST

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಬಳಿಯ ಸಾಗರ್ ಆಸ್ಪತ್ರೆಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

‘ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ, ಎಲ್ಲ ಮಹಡಿಯಲ್ಲಿ ಹೊಗೆ ಆವರಿಸಿಕೊಂಡಿತ್ತು’ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದರು.

‘ನಾಲ್ಕನೇ ಮಹಡಿಯಲ್ಲಿ ಹೆಚ್ಚು ಜನರು ಇರಲಿಲ್ಲ. ಉಳಿದ ಮಹಡಿಯಲ್ಲಿದ್ದಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರು ಹೊರಗೆ ಓಡಿಬಂದರು. ಪೊಲೀಸ್ ನಿಯಂತ್ರಣ ಕೊಠಡಿಗೂ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿ ರೋಗಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಯಿತು. ಆಸ್ಪತ್ರೆಯ ಕೆಲ ವಸ್ತುಗಳು ಸುಟ್ಟಿವೆ. ಉಳಿದಂತೆ ಹೆಚ್ಚು ಹಾನಿ ಆಗಿಲ್ಲ’ ಎಂದರು.

ADVERTISEMENT

‘ಆಸ್ಪತ್ರೆಯ ಯುಪಿಎಸ್‌ನಲ್ಲಿ ಶಾರ್ಟ್‌ ಸರ್ಕೀಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದೆ. ತನಿಖೆಯಿಂದಲೇ ನಿಖರ ಮಾಹಿತಿ ಲಭ್ಯವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.