ADVERTISEMENT

ಅಗ್ನಿಶಾಮಕ ದಳದ ಸೇವೆಗೆ 77 ಮಂದಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2019, 19:31 IST
Last Updated 4 ಏಪ್ರಿಲ್ 2019, 19:31 IST

ಬೆಂಗಳೂರು: ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ತರಬೇತಿ ಪಡೆದ ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅಗ್ನಿಶಾಮಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಗುರುವಾರ ನಡೆಯಿತು.

ಬನ್ನೇರುಘಟ್ಟ ರಸ್ತೆಯಲ್ಲಿರುವ ಅಕಾಡೆಮಿಯ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 51 ಠಾಣಾಧಿಕಾರಿಗಳು ಹಾಗೂ 26 ಅಗ್ನಿಶಾಮಕರು ಸೇವೆಯ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಪ್ರಶಿಕ್ಷಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ADVERTISEMENT

‘ಧಾರವಾಡ ಕಟ್ಟಡ ದುರಂತ, ಕೊಡಗು ನೆರೆ ಹಾಗೂ ಯಲಹಂಕದಲ್ಲಿ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದ ಪ್ರಕರಣದಲ್ಲಿ ಅಗ್ನಿಶಾಮಕ ದಳದವರು ಮಾಡಿದ ಕೆಲಸ ಶ್ಲಾಘನೀಯ’ ಎಂದು ವಿಜಯ್‌ ಭಾಸ್ಕರ್ ಹೇಳಿದರು.

‘ಶಿಸ್ತುಬದ್ಧ ತರಬೇತಿ ಪಡೆದಿರುವ 77 ಮಂದಿ ಸಾರ್ವಜನಿಕರಿಗೆ ಸೇವೆ ಒದಗಿಸಲು ಅಣಿಯಾಗಿದ್ದಾರೆ. ಅವರೆಲ್ಲ ಉತ್ತಮವಾಗಿ ಕರ್ತವ್ಯ ನಿರ್ವಹಿಸಲಿ’ ಎಂದು ಹಾರೈಸಿದರು.

ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಡಿಜಿಪಿ ಎಂ.ಎನ್.ರೆಡ್ಡಿ, ಎಡಿಜಿಪಿ ಸುನೀಲ್ ಅಗರವಾಲ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.