ADVERTISEMENT

ಅಂಬಲಿಪುರ ಕೆರೆಯಲ್ಲಿ ಮೀನುಗಳ ಸಾವು: KSPCBಗೆ ಎನ್‌ಜಿಟಿ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2023, 19:57 IST
Last Updated 26 ಆಗಸ್ಟ್ 2023, 19:57 IST
ಬಿಲ್ಡರ್‌ಗೆಎನ್‌ಜಿಟಿ ನೋಟಿಸ್‌ ಜಾರಿ
ಬಿಲ್ಡರ್‌ಗೆಎನ್‌ಜಿಟಿ ನೋಟಿಸ್‌ ಜಾರಿ   

ನವದೆಹಲಿ: ಬೆಂಗಳೂರಿನ ಮಹದೇವಪುರ ವಲಯದ ಕೆಳ ಅಂಬಲಿಪುರ ಕೆರೆಯಲ್ಲಿ ಮೀನುಗಳ ಸಾಮೂಹಿಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಪ್ರತಿವಾದಿಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಚೆನ್ನೈ ಪೀಠ ನೋಟಿಸ್‌ ಜಾರಿ ಮಾಡಿದೆ. 

ಮೀನುಗಳು ಮೃತಪಟ್ಟ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡಿರುವ ಪೀಠವು, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆಯೂ ಪ್ರತಿವಾದಿಗಳಿಗೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಸೆ. 29ಕ್ಕೆ ಮುಂದೂಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT