ADVERTISEMENT

ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿಯಾಗಿ 500 ವಿಶೇಷ ಬಸ್

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 19:46 IST
Last Updated 25 ಆಗಸ್ಟ್ 2022, 19:46 IST
ಕೆಎಸ್‌ಆರ್‌ಟಿಸಿ
ಕೆಎಸ್‌ಆರ್‌ಟಿಸಿ   

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 500 ವಿಶೇಷ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

ಇದೇ 29 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. 31ರಂದು ಬೆಂಗಳೂರಿಗೆ ವಾಪಸ್ ಬರಲಿವೆ.

ಮೆಜೆಸ್ಟಿಕ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಬಸ್‌ಗಳು ಸಂಚಾರ ಮಾಡಲಿವೆ.

ADVERTISEMENT

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ತೆರಳಲಿವೆ. ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚರಿಸಲಿವೆ.

ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5 ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ 10 ರಷ್ಟು ರಿಯಾಯಿತಿ ಕೊಡಲಾಗುವುದು.

ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದಲೂ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.