ADVERTISEMENT

ದೇವಸಂದ್ರ: ಮತ್ತೆ ಕಾಣಿಸಿಕೊಂಡ ಫ್ಲೆಕ್ಸ್‌

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2018, 19:49 IST
Last Updated 3 ಡಿಸೆಂಬರ್ 2018, 19:49 IST
ದೇವಸಂದ್ರದಲ್ಲಿ ಸೋಮವಾರ ಕಂಡು ಬಂದ ಬ್ಯಾನರ್‌
ದೇವಸಂದ್ರದಲ್ಲಿ ಸೋಮವಾರ ಕಂಡು ಬಂದ ಬ್ಯಾನರ್‌   

ಬೆಂಗಳೂರು: ಹೈಕೋರ್ಟ್‌ ಮಧ್ಯಪ್ರವೇಶದ ಬಳಿಕ ನಗರದಲ್ಲಿ ಎರಡು ತಿಂಗಳಿಂದ ಕಡಿಮೆಯಾಗಿದ್ದ ಫ್ಲೆಕ್ಸ್‌ ಹಾವಳಿ ಮತ್ತೆ ಆರಂಭವಾಗಿದೆ. ಇತ್ತೀಚೆಗೆ ನಗರದ ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಹೊಂದಿರುವ ಬ್ಯಾನರ್‌ಗಳು ಮತ್ತೆ ಕಾಣಿಸಿಕೊಳ್ಳತೊಡಗಿವೆ.

ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದ ದೇವಸಂದ್ರ ವಾರ್ಡ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಬಿ.ಎ.ಬಸವರಾಜ್‌ ಹಾಗೂ ಪಾಲಿಕೆ ಸದಸ್ಯ ಎಂ.ಎನ್‌.ಶ್ರೀಕಾಂತ್‌ (ಪುಟ್ಟ) ಅವರಿಗೆ ಸ್ವಾಗತಕೋರಿ ಬ್ಯಾನರ್‌ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಹೈಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಳ್ಳುವ ಭಯದಿಂದ ಪಾಲಿಕೆ ಅಧಿಕಾರಿಗಳು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದರು. ಈಗ ಮತ್ತೆ ಈ ಹಾವಳಿ ಕಾಣಿಸಿಕೊಳ್ಳುತ್ತಿದೆ. ಪಾಲಿಕೆ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಇಂತಹ ಬ್ಯಾನರ್‌ಗಳನ್ನು ತೆರವುಗೊಳಿಸಬೇಕು’ ಎಂದು ಅವರು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.