ADVERTISEMENT

Bengaluru Airport | ದಟ್ಟ ಮಂಜು: 48 ವಿಮಾನ ಹಾರಾಟ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 0:20 IST
Last Updated 16 ಡಿಸೆಂಬರ್ 2025, 0:20 IST
<div class="paragraphs"><p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ</p></div>

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

   

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಸೋಮವಾರ ಮುಂಜಾನೆ ದಟ್ಟವಾಗಿ ಮಂಜು ಆವರಿಸಿದ್ದರಿಂದ 48 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.

ಬೆಳಗ್ಗೆ 4.39 ರಿಂದ 10.30 ಗಂಟೆವರೆಗೂ ರನ್ ವೇ ಸಂಪೂರ್ಣ ಮಂಜಿನಿಂದ ಆವೃತ್ತವಾಗಿತ್ತು. ಇದರಿಂದಾಗಿ ಎರಡು ಅಂತರ ರಾಷ್ಟ್ರೀಯ ವಿಮಾನ ಹಾಗೂ 46 ದೇಶೀಯ ವಿಮಾನ ತಲುಪುವುದು ವಿಳಂಬವಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ಮಾಹಿತಿ ನೀಡಿದ್ದಾರೆ.

ADVERTISEMENT

ಹವಾಮಾನ ಇಲಾಖೆ ಪ್ರಕಾರ ಡಿ.15ರಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14.6 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಸರಾಸರಿ ತಾಪಮಾನಕ್ಕಿಂತ 2.2 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ಎಂದು ಹೇಳಿದೆ.

ಅಷ್ಟೇ ಅಲ್ಲದೇ ದೇವನಹಳ್ಳಿ ಸುತ್ತಮುತ್ತ ಹೆದ್ದಾರಿಗಳಲ್ಲಿ ಮುಂಜಾನೆ ಬಹಳ ಹೊತ್ತು ಮಂಜು ಕವಿದಿದ್ದ ಕಾರಣ ವಾಹನಗಳು ನಿಧಾನ ಗತಿಯಲ್ಲಿ ಸಾಗಿದವು.