ಬೆಂಗಳೂರು: ಲಾಲ್ಬಾಗ್ ಉದ್ಯಾನ ದಲ್ಲಿ ಪ್ರತಿವರ್ಷದಂತೆ ಈ ಜನವರಿಯಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಕಾರಣದಿಂದ ರದ್ದುಪಡಿಸಲಾಗಿದೆ.
ಕೊರೊನಾ ಸೋಂಕಿನ ಕಾರಣಕ್ಕೆ ಆಗಸ್ಟ್ನಲ್ಲಿ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವೂ ರದ್ದಾಗಿತ್ತು.
ಪ್ರದರ್ಶನಕ್ಕೆ ಹೆಚ್ಚು ಜನರು ಸೇರುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಈ ಪ್ರದರ್ಶನವನ್ನೂ ರದ್ದುಗೊಳಿಸಲು ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘ ತೀರ್ಮಾನಿಸಿವೆ.
‘ಜನವರಿಯಲ್ಲಿ ಆಯೋಜಿಸುವ ಪ್ರದರ್ಶನಕ್ಕೆ ಈಗಿನಿಂದಲೇ ತಯಾರಿಗಳು ನಡೆಯಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಯಾವುದೇ ತಯಾರಿ ನಡೆದಿಲ್ಲ’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಜಗದೀಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.