ADVERTISEMENT

ಕ್ಷೇತ್ರ ವ್ಯಾಪ್ತಿಯ 10 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 11:27 IST
Last Updated 30 ಮಾರ್ಚ್ 2020, 11:27 IST
ಸಚಿವ ಸೋಮಣ್ಣ ಅವರು ಬಡವರಿಗೆ ಆಹಾರ ಕಿಟ್ ವಿತರಿಸಿದರು. ವಿಧಾನಪರಿಷತ್ ಸದಸ್ಯ ರವಿಕುಮಾರ್, ಕೆ.ಉಮೇಶ್ ಶೆಟ್ಟಿ, ಎಸ್.ರಾಜು ಹಾಗೂ ಇತರರು ಇದ್ದರು.
ಸಚಿವ ಸೋಮಣ್ಣ ಅವರು ಬಡವರಿಗೆ ಆಹಾರ ಕಿಟ್ ವಿತರಿಸಿದರು. ವಿಧಾನಪರಿಷತ್ ಸದಸ್ಯ ರವಿಕುಮಾರ್, ಕೆ.ಉಮೇಶ್ ಶೆಟ್ಟಿ, ಎಸ್.ರಾಜು ಹಾಗೂ ಇತರರು ಇದ್ದರು.   

ಬೆಂಗಳೂರು: ಗೋವಿಂದರಾಜ ನಗರ ಹಾಗೂ ವಿಜಯನಗರ ವಾರ್ಡ್‍ನ 10 ಸಾವಿರ ಬಡ ಕುಟುಂಬಗಳಿಗೆ ವಸತಿ ಸಚಿವ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಸೋಮವಾರ ಆಹಾರ ಕಿಟ್ ವಿತರಿಸಲಾಯಿತು.


ಬಾಲಗಂಗಾಧರನಾಥ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ಕೂಲಿ ಕಾರ್ಮಿಕರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಉಪ್ಪು, ಸಕ್ಕರೆ, ಮೈದಾ ಇನ್ನಿತರ ದಿನಸಿ ಪದಾರ್ಥಗಳನ್ನೊಳಗೊಂಡ ಆಹಾರ ಕಿಟ್ ವಿತರಣೆ ನೀಡಲಾಯಿತು. ಆರೋಗ್ಯ ತಪಾಸಣೆ ಕಿಟ್, ಸೋಂಕು ನಿವಾರಕ ಔಷಧಿ ಸಿಂಪಡಣೆ ಯಂತ್ರಗಳು ಹಾಗೂ ಅಗ್ನಿಶಾಮಕ ವಾಹನ ಮೂಲಕ ರಾಸಾಯನಿಕ ಸಿಂಪಡನೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಬಳಿಕ ಸೋಮಣ್ಣ ಮಾತನಾಡಿ, ’ಗೋವಿಂದರಾಜನಗರ, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಪಿ.ಎಲ್.ಕಾರ್ಡ್ ಇಲ್ಲದ ಬಡವರು, ಕೂಲಿ ಕಾರ್ಮಿಕರು, ಆಟೊ ಚಾಲಕರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಹಸಿವನಿಂದ ಯಾರೂ ಬಳಲಬಾರದು. ಬಡವರ ಅನುಕೂಲಕ್ಕಾಗಿ ಸಹಾಯವಾಣಿ ಸೇವೆ ಒದಗಿಸಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಶೀಘ್ರದಲ್ಲೇ ನಮಗೆ ಜಯ ಸಿಗಲಿದೆ' ಎಂದರು.

ADVERTISEMENT

ಪಾಲಿಕೆ ಸದಸ್ಯ ಕೆ.ಉಮೇಶ್ ಶೆಟ್ಟಿ, ’ಬಡವರು ಸುಲಭವಾಗಿ ಆಹಾರ ತಯಾರಿಸಿಕೊಳ್ಳಲು ಅನುಕೂಲವಾಗುವಂತೆ ಆಹಾರ ಕಿಟ್‍ಗಳನ್ನು ವಿತರಿಸಿದ್ದೇವೆ. ಲಾಕ್‍ಡೌನ್ ಮುಗಿಯುವವರೆಗೂ ಆಹಾರ ವಿತರಣೆ ಮಾಡಲಿದ್ದೇವೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.