ADVERTISEMENT

ಫುಟ್‌ಪಾತ್ ಅತಿಕ್ರಮಣ: ಕ್ರಿಮಿನಲ್ ಕ್ರಮಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 19:41 IST
Last Updated 21 ಏಪ್ರಿಲ್ 2021, 19:41 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಪಾದಚಾರಿ ಮಾರ್ಗಗಳ ಅತಿಕ್ರಮಣ ಪ್ರಕರಣಗಳಲ್ಲಿ ಕ್ರಿಮಿನಲ್ ಕ್ರಮಗಳನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ದಂಡ ವಿಧಿಸುವ ಪ್ರಕ್ರಿಯೆ ಜಾರಿಗೊಳಿಸದ ಹೊರತು ನಿರ್ದೇಶನಗಳು ಕೇವಲ ಕಾಗದದಲ್ಲಿ ಉಳಿಯುತ್ತವೆ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

‘ಪಾದಚಾರಿ ಮಾರ್ಗಗಳು ಮತ್ತು ಸಾರ್ವಜನಿಕ ಬೀದಿಗಳು ಸಾರ್ವಜನಿಕರ ಓಡಾಟಕ್ಕೆ ಮುಕ್ತವಾಗಿರಬೇಕು. ಈ ನಿಯಮ ಉಲ್ಲಂಘನೆಯನ್ನು ಸಂಬಂಧಪಟ್ಟ ಪ್ರಾಧಿಕಾರಗಳು ಸಹಿಸಬಾರದು. ನಿಬಂಧನೆಗಳನ್ನು ಅನುಷ್ಠಾನಗೊಳಿಸದೆ ಇರುವುದು ಸಂವಿಧಾನದ ಉಲ್ಲಂಘನೆ ಆಗಲಿದೆ’ ಎಂದು ಪೀಠ ಹೇಳಿತು.

ADVERTISEMENT

ಆರ್‌.ಎಸ್.ರಾಮಚಂದ್ರರೆಡ್ಡಿ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ‘ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ಪಾದಚಾರಿ ಮಾರ್ಗಗಳ ಮೇಲೆಯೇ ನಿಲ್ಲಿಸಲಾಗುತ್ತಿದೆ. ಇದನ್ನು ನಿಯಂತ್ರಿಸಬೇಕು’ ಎಂದು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.