ಬೆಂಗಳೂರು: ಹೈನು ಉತ್ಪನ್ನವನ್ನು ಏಷ್ಯಾ–ಪೆಸಿಫಿಕ್ ರಾಷ್ಟ್ರಗಳ ಮುಕ್ತ ವ್ಯಾಪಾರ ಒಪ್ಪಂದದ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಕರ್ನಾಟಕ ಹಾಲು ಮಹಾಒಕ್ಕೂಟ (ಕೆಎಂಎಫ್) ಮತ್ತು ಗುಜರಾತ್ನ ಅಮುಲ್ ಸಂಘಟನೆಗಳು ಪ್ರಬಲ ವಿರೋಧ ವ್ಯಕ್ತಪಡಿಸಿವೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಎಲ್.ಜಾರಕಿಹೊಳಿ ಅವರು ಈ ಸಂಬಂಧ ಕೇಂದ್ರದ ವಾಣಿಜ್ಯ ಮತ್ತು ಕೈಗಾ
ರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದು, ನ್ಯೂಜಿಲೆಂಡ್, ಆಸ್ಟ್ರೇಲಿಯಾಗಳಿಂದ ಹಾಲು ದೇಶಕ್ಕೆ ಬರುವಂತಾದರೆ ನಮ್ಮ ಹೈನುಗಾರರ ಅವಸಾನ ನಿಶ್ಚಿತ ಎಂದು ಹೇಳಿದ್ದಾರೆ.
‘ಕೆಲವೇ ವರ್ಷಗಳಲ್ಲಿ ದೇಶೀಯ ಹಾಲು ಉತ್ಪಾದನೆಯು ಬೇಡಿಕೆಗಿಂತ ಅಧಿಕವಾಗಲಿದೆ. ಹೀಗಿರುವಾಗ ವಿದೇಶಿ ಹಾಲು ತರಿಸಿಕೊಳ್ಳುವ ಅಗತ್ಯ ಇಲ್ಲ. ರಾಜ್ಯ ಸರ್ಕಾರ ಈ ವಿಷಯದಲ್ಲಿ ಕೇಂದ್ರದ ಮೇಲೆ ಒತ್ತಡ ಹಾಕಬೇಕೆಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇನೆ’ ಎಂದು ಬಾಲಚಂದ್ರ ಜಾರಕಿಹೊಳಿ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.