ADVERTISEMENT

‘ಸವಾಲುಗಳಿಗೆ ಉತ್ತರಿಸುವ ಶಿಕ್ಷಣ ಅಗತ್ಯ’

ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಅಭಿಮತ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2019, 4:43 IST
Last Updated 28 ಡಿಸೆಂಬರ್ 2019, 4:43 IST
ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಮಾತನಾಡಿದರು. (ಎಡಗಡೆಯಿಂದ) ಸಂಸ್ಥೆಯ ಅಧ್ಯಕ್ಷ ಕೆ.ಎಂ.ನಾಗರಾಜ್, ವೀರಪ್ಪ ಮೊಯಿಲಿ, ಬೆಂಗಳೂರು ನಗರದ ಪೊಲೀಸ್ ಕಮಿಷನರ್‌ ಭಾಸ್ಕರ ರಾವ್ ಮತ್ತು ಬಿಬಿಎಂಪಿ ಸದಸ್ಯೆ ಗಂಗಾಂಬಿಕೆ ಇದ್ದರು -   ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಮಾತನಾಡಿದರು. (ಎಡಗಡೆಯಿಂದ) ಸಂಸ್ಥೆಯ ಅಧ್ಯಕ್ಷ ಕೆ.ಎಂ.ನಾಗರಾಜ್, ವೀರಪ್ಪ ಮೊಯಿಲಿ, ಬೆಂಗಳೂರು ನಗರದ ಪೊಲೀಸ್ ಕಮಿಷನರ್‌ ಭಾಸ್ಕರ ರಾವ್ ಮತ್ತು ಬಿಬಿಎಂಪಿ ಸದಸ್ಯೆ ಗಂಗಾಂಬಿಕೆ ಇದ್ದರು -   ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಶಿಕ್ಷಣವು ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ಜತೆಗೆ ನಮ್ಮೆದುರಿನ ಜಾಗತಿಕ ಸವಾಲುಗಳನ್ನೂ ಎದುರಿಸುವ ಶಕ್ತಿಶಾಲಿ ಸಾಧನವಾಗಬೇಕು’ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು.

ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ದಿ ಕಮ್ಯುನಿಟಿ ಸೆಂಟರ್ ಗ್ರೂಪ್ ಆಫ್ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್‌ನ ವಜ್ರ ಮಹೋತ್ಸವದಲ್ಲಿ ಅವರು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

‘ಬದಲಾವಣೆಯ ಆಲೋಚನೆಗಳನ್ನು ಬಿತ್ತುವ ಹಾಗೂ ನಿರಂತರ ಸಕಾರಾತ್ಮಕ ನಿಲುವುಗಳನ್ನು ಪಸರಿಸುವ ಶಿಕ್ಷಣ ಸದ್ಯದ ಸಂದರ್ಭಕ್ಕೆ ಅತ್ಯಗತ್ಯ. ಇಷ್ಟಾಗಿಯೂಜಗತ್ತಿನಪ್ರತಿಷ್ಠಿತ ಕಂಪನಿಗಳಲ್ಲಿ ಉನ್ನತ ಹುದ್ದೆಗಳನ್ನು ಭಾರತೀಯರು ಅಲಂಕರಿಸುತ್ತಿರುವುದುಸಮಾಧಾನಕರ ಸಂಗತಿ. ಆದರೆ, ಇದೀಗ ಜಾಗತಿಕ ಮಟ್ಟದಲ್ಲಿ ಉದ್ಯೋಗ ಸ್ಪರ್ಧೆ ಹೆಚ್ಚುತ್ತಿದೆ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಕೌಶಲ ವೃದ್ಧಿಸಲೂ ಮುಂದಾಗಬೇಕು’ ಎಂದು ಹೇಳಿದರು.

ADVERTISEMENT

ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ, ‘ಶಿಕ್ಷಣ
ವ್ಯವಸ್ಥೆಯಲ್ಲಿ ಬದಲಾವಣೆ ತರುವ ಕೆಲಸವಾಗಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳು ಇದನ್ನು ಅರಿತು, ಗುಣಮಟ್ಟದ ಶಿಕ್ಷಣವನ್ನು ನೀಡಲು ಸಜ್ಜುಗೊಳ್ಳಬೇಕು. ವಿದ್ಯಾರ್ಥಿಗಳು ಪಠ್ಯದ ಶಿಕ್ಷಣವನ್ನು ಅಭ್ಯಸಿಸುವ ಜತೆಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನೂ ಎದುರಿಸಲು ಅಣಿಯಾಗಬೇಕು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.