ಬೆಂಗಳೂರು: ಭಾರತೀಯ ತೋಟ ಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ₹ 2.50 ಲಕ್ಷ ಪಡೆದು ವಂಚಿಸ ಲಾಗಿದ್ದು, ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಂಚನೆ ಗೀಡಾಗಿರುವ ಹೆಸರಘಟ್ಟದ ನಂಜೇಗೌಡ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ವಿನಯ್ ಮತ್ತು ಶಿವಪ್ಪ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಪದವೀಧರರಾದ ನಂಜೇಗೌಡ, ಸದ್ಯ ಕೃಷಿ ಮಾಡುತ್ತಿದ್ದಾರೆ. ಪರಿಚಯಸ್ಥರಾದ ಶಿವಪ್ಪ ಅವರ ಮೂಲಕ ವಿನಯ್ ಪರಿಚಯವಾಗಿತ್ತು. ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದ ವಿನಯ್, ಸಂಸ್ಥೆಯ ನಿರ್ದೇಶಕರ ಮೂಲಕ ಕೆಲಸ ಕೊಡಿಸುವುದಾಗಿ ಹೇಳಿದ್ದರು. ಅದಕ್ಕೆಂದು ₹ 2.50 ಲಕ್ಷ ಪಡೆದಿದ್ದ ಅವರು ವರ್ಷವಾದರೂ ಕೆಲಸ ಕೊಡಿಸಿಲ್ಲ. ಹಣವನ್ನೂ ವಾಪಸು ಕೊಟ್ಟಿಲ್ಲ. ಹಣ ಕೇಳಿದರೆ ತಮ್ಮ ವಿರುದ್ಧವೇ ಪ್ರಕರಣ ದಾಖಲಿಸುವುದಾಗಿ ಹೆದರಿಸುತ್ತಿದ್ದಾರೆಂದು ನಂಜೇಗೌಡ ದೂರಿದ್ದಾರೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.