ADVERTISEMENT

ಉಚಿತ ಮಧುಮೇಹ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 16:30 IST
Last Updated 27 ಅಕ್ಟೋಬರ್ 2021, 16:30 IST

ಬೆಂಗಳೂರು: ಅಬಲಾಶ್ರಮ, ಭಾರತೀಯ ಆಯುರ್ವೇದ ಪ್ರತಿಷ್ಠಾನ ಹಾಗೂ ಸ್ವಸ್ಥ ಸಮೃದ್ಧ ಭಾರತ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.

ನವೆಂಬರ್‌ 14ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಅಬಲಾಶ್ರಮದ ಸಭಾಂಗಣದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ.

‘ನೋಂದಣಿ ಉಚಿತವಾಗಿದ್ದು, ಶಿಬಿರದಲ್ಲಿ ಭಾಗವಹಿಸುವವರೆಲ್ಲಾ ಹೆಸರು ನೋಂದಾಯಿಸುವುದು ಕಡ್ಡಾಯ’ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಹೆಚ್ಚಿನ ಮಾಹಿತಿಗೆ 8050010100 ಅಥವಾ 9742013344ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.