ADVERTISEMENT

ಅಪಘಾತದಲ್ಲಿ ಮೃತ ವಿದ್ಯಾರ್ಥಿನಿ ಶಿಲ್ಪಶ್ರೀ ಸಹೋದರಿಗೆ ಉಚಿತ ಶಿಕ್ಷಣ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 3:05 IST
Last Updated 1 ನವೆಂಬರ್ 2022, 3:05 IST
   

ಬೆಂಗಳೂರು: ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಶಿಲ್ಪಶ್ರೀ ಸಹೋದರಿಗೆ ಸ್ನಾತಕೋತ್ತರ ಶಿಕ್ಷಣವನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶಿಲ್ಪಶ್ರೀ ಸಹೋದರಿ ಸದ್ಯ ಪದವಿ ಅಧ್ಯಯನ ಕೈಗೊಂಡಿದ್ದು, ಸ್ನಾತಕೋತ್ತರ ಪದವಿಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಜತೆಗೆ, ಶಿಲ್ಪಶ್ರೀ ಕುಟುಂಬಕ್ಕೆ ಹಣಕಾಸು ನೆರವು ನೀಡಲು ವಿಶ್ವವಿದ್ಯಾಲಯದ ಎಲ್ಲ ನೌಕರರು ಒಂದು ದಿನದ ವೇತನ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ನೌಕರರು ಒಂದು ದಿನದ ವೇತನ ನೀಡುವುದು ಕಡ್ಡಾಯವಲ್ಲ. ನಾವು ನೌಕರರಿಗೆ ಮನವಿ ಮಾಡುತ್ತೇವೆ. ಇಚ್ಛೆವುಳ್ಳವರು ಮಾತ್ರ ನೀಡಬಹುದು. ಸಿಂಡಿಕೇಟ್‌ ಸದಸ್ಯರು ಸಹ ಸಭೆಯ ಗೌರವ ಧನವನ್ನು ದೇಣಿಗೆಯಾಗಿ ನೀಡಲಿದ್ದಾರೆ’ ಎಂದು ಕುಲಪತಿ ಡಾ. ಎಸ್‌.ಎಂ. ಜಯಕರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.