ADVERTISEMENT

ಗಣೇಶ ಚತುರ್ಥಿಗೆ ಉಚಿತ ಔಷಧ ವಿತರಣೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 22:25 IST
Last Updated 10 ಆಗಸ್ಟ್ 2020, 22:25 IST

ಬೆಂಗಳೂರು: ಗಣೇಶ ಚತುರ್ಥಿ ಅಂಗವಾಗಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯು ರೋಗ ನಿರೋಧಕ ಶಕ್ತಿ ವೃದ್ಧಿಸುವ ಹೋಮಿಯೋಪತಿ 'ಅರ್ಸೆನಿಕ್ ಅಲ್ಬಮ್-30' ಔಷಧವನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಇದೇ 22ರಂದು ಹಮ್ಮಿಕೊಂಡಿದೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು,' ಈ ಔಷಧವನ್ನು ಹಬ್ಬದ ಅಂಗವಾಗಿ ಏಳು ಲಕ್ಷ ಮಂದಿಗೆ ವಿತರಿಸಲು ಸಮಿತಿ ನಿರ್ಧರಿಸಿದೆ.

ಇದಕ್ಕೆ ಡಾ.ಜಿವಿಸಿ ಹೋಮಿಯೋ ಪತಿ ಸೆಲ್ಫ್ ರಿಲಯನ್ಸ್ ಫೋರಂ ಸಂಸ್ಥೆ ಕೈಜೋಡಿಸಿದೆ. ಔಷಧ ಪಡೆಯಲು ಇಚ್ಛಿಸುವವರು 9380760925 ಸಂಖ್ಯೆಗೆ ಸಂದೇಶ ಕಳುಹಿಸಬಹುದು' ಎಂದು ಮಾಹಿತಿ ನೀಡಿದರು.

ADVERTISEMENT

‘ಕೊರೊನಾ ಕಾರಣಕ್ಕೆ ಈ ಬಾರಿಯ ಗಣೇಶ ಚತುರ್ಥಿ ಆಚರಣೆಗೆ ಪಾಲಿಕೆ ಸೂಚಿಸಿರುವ ಎಲ್ಲ ನಿಯಮಗಳನ್ನು ಗಣೇಶೋತ್ಸವ ಸಮಿತಿಗಳು ಪಾಲಿಸಬೇಕು. ಹಬ್ಬದ ವೇಳೆ ಸಾಮೂಹಿಕ ಮೆರವಣಿಗೆಗಳನ್ನು ನಡೆಸದಿರಲು ಸಮಿತಿ ನಿರ್ಧರಿಸಿದೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.