ADVERTISEMENT

ಗಣೇಶೋತ್ಸವ: ಸರ್ಕಾರದ ಹಸ್ತಕ್ಷೇಪ ಬೇಡ

ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 19:32 IST
Last Updated 1 ಸೆಪ್ಟೆಂಬರ್ 2021, 19:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಗಣೇಶ ಮೂರ್ತಿಯ ಎತ್ತರ, ಆಕಾರ ನಿಗದಿ ಮತ್ತು ಆಚರಣೆಗೆ ದಿನಗಳ ನಿರ್ಬಂಧ ಹೇರುವ ಮೂಲಕ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಆಗ್ರಹಿಸಿದೆ.

ಭಕ್ತರ ಅಭಿಲಾಷೆಯಂತೆ ಮೂರ್ತಿಗಳನ್ನು ಇಟ್ಟು ಪೂಜಿಸಲು ಅವಕಾಶ ಇರಬೇಕು. ಅತ್ಯಂತ ಸೂಕ್ಷ್ಮ ವಿಷಯ ಆಗಿರುವುದರಿಂದ ಗಣೇಶೋತ್ಸವ ಸಮಿತಿಗಳನ್ನು ವಿಶ್ವಾಸಕ್ಕೆ ಪಡೆದು ಸಹಮತದ ನಿಯಮಗಳನ್ನು ರೂಪಿಸಬೇಕು ಎಂದು ಕೋರಿದೆ.

ಗಣಪತಿ ಮೂರ್ತಿ ತಯಾರಿಸುವ ಮತ್ತು ಮಾರಾಟ ಮಾಡುವ ಕಲಾವಿದರು ಮತ್ತು ವ್ಯಾಪಾರಿಗಳು ನಿರ್ಭೀತಿಯಿಂದ ವಹಿವಾಟು ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.