ADVERTISEMENT

ಗಾಂಜಾ ಮತ್ತಿನಲ್ಲಿ ಜನರಿಗೆ ಬೆದರಿಕೆ: ಮೂವರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 5:30 IST
Last Updated 6 ಡಿಸೆಂಬರ್ 2021, 5:30 IST

ಬೆಂಗಳೂರು: ಗಾಂಜಾ ಸೇವಿಸಿ, ಅದರ ಮತ್ತಿನಲ್ಲಿ ಸುತ್ತಾಡಿ ಸಾರ್ವಜನಿಕರನ್ನು ಬೆದರಿಸುತ್ತಿದ್ದ ಮೂವರು ಬಾಲಕರ ತಂಡವನ್ನು ಪುಲಿಕೇಶಿನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ತಮ್ಮದೇ ತಂಡ ಕಟ್ಟಿಕೊಂಡಿದ್ದ ಬಾಲಕರು, ಠಾಣೆ ವ್ಯಾಪ್ತಿಯಲ್ಲಿ ನಿತ್ಯವೂ ರಾತ್ರಿ ಸುತ್ತಾಡುತ್ತಿದ್ದರು. ಮಾರಕಾಸ್ತ್ರ ಹಿಡಿದು ಜನರನ್ನು ಬೆದರಿಸುತ್ತಿದ್ದರು. ದಾರಿಹೋಕರನ್ನು ಹಾಗೂ ಅಂಗಡಿಗಳಿಗೆ ನುಗ್ಗಿ ಸುಲಿಗೆ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಶನಿವಾರ ರಾತ್ರಿ ಬಾಲಕರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಲಾಯಿತು. ಅವರೆಲ್ಲರೂ ಗಾಂಜಾ ಮತ್ತಿನಲ್ಲಿದ್ದರು. ವೈದ್ಯಕೀಯ ಪರೀಕ್ಷೆ ನಡೆಸಿ, ಬಾಲ ನ್ಯಾಯಮಂಡಳಿಯ ಸುಪರ್ದಿಗೆ ಒಪ್ಪಿಸಲಾಗಿದೆ’ ಎಂದೂ ತಿಳಿಸಿವೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.