ಬೆಂಗಳೂರು: ‘ಪ್ರಶಾಂತಿ ಎಕ್ಸ್ಪ್ರೆಸ್’ನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಒಡಿಶಾ ರಾಜ್ಯದ ಭದ್ರಾಕ್ ಜಿಲ್ಲೆಯ ಭುವನೇಶ್ವರದ ಕಾಲಕನ್ಹು ಪಾಣಿಗ್ರಾಹಿ ಎಂಬಾತನನ್ನು ಬಂಧಿಸಲಾಗಿದೆ.
‘ಈತ ಮೆಕ್ಯಾನಿಕ್ ಆಗಿದ್ದ. ಹಿಂದೂಪುರದಿಂದ ಬೆಂಗಳೂರಿನ ಯಶವಂತಪುರಕ್ಕೆ ಬರುತ್ತಿದ್ದ ರೈಲಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ’ ಎಂದು ರೈಲ್ವೆ ಪೊಲೀಸರು ತಿಳಿಸಿದ್ಧಾರೆ.
‘ಬಂಧಿತ ಆರೋಪಿಯಿಂದ ₹1.27 ಲಕ್ಷದ ಗಾಂಜಾ ಸೊಪ್ಪು ವಶಕ್ಕೆ ಪಡೆಯಲಾಗಿದೆ. ಮೊಬೈಲ್ ಕೂಡ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.