ADVERTISEMENT

ಗಾಂಜಾ ಮಾರುತ್ತಿದ್ದ ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 16:24 IST
Last Updated 22 ಫೆಬ್ರುವರಿ 2022, 16:24 IST

ಬೆಂಗಳೂರು: ನಾಗರಬಾವಿ ಎರಡನೇ ಹಂತದಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರು ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.

‘ವಿನೋದ್‌ಕುಮಾರ್, ರಂಜಿತ್, ಸಯ್ಯದ್ ಇಮ್ತಿಯಾಜ್ ಹಾಗೂ ಪವನ್‌ಕುಮಾರ್ ಬಂಧಿತರು. ಅವರಿಂದ 7 ಕೆ. ಜಿ 35 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನಾಗರಬಾವಿ ಎರಡನೇ ಹಂತದ ಕೊಟ್ಟಿಗೆಪಾಳ್ಯ–ಕೆಂಗೇರಿ ನಡುವಿನ ರಸ್ತೆಯಲ್ಲಿ ಮರಳು ಸಂಗ್ರಹ ಘಟಕವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದೇ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು, ಗಾಂಜಾ ಪೊಟ್ಟಣಗಳನ್ನು ಮಾರುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.