ಬೆಂಗಳೂರು: ಆಂಧ್ರಪ್ರದೇಶದಿಂದ ಗಾಂಜಾ ತಂದುನಗರದಲ್ಲಿ ಮಾರುತ್ತಿದ್ದ ಇಬ್ಬರನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಮೆಜೆಸ್ಟಿಕ್ ಕಡೆಯಿಂದ ಸಂಜಯ್ಗಾಂಧಿನಗರ ಕಡೆ ಏ.8ರಂದು ಹೊರಟಿದ್ದ ಬೈಕ್ನಲ್ಲಿ ಗಾಂಜಾ ಸಾಗಿಸುತ್ತಿದ್ದು, 22 ಕೆ.ಜಿ ಗಾಂಜಾ ಪತ್ತೆಯಾಯಿತು’ ಎಂದು ಪೊಲೀಸರು ಹೇಳಿದರು.
‘ಬಂಧಿತರು ಅಪರಾಧ ಹಿನ್ನೆಲೆಯುಳ್ಳವರು. ಈ ಹಿಂದೆ ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದರು. ಪುನಃ ಗಾಂಜಾ ಮಾರಾಟ ಮುಂದುವರಿಸಿದ್ದರು’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.