ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಐದು ಮಂದಿ ಆರೋಪಿಗಳನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಅಂಶು ಆನಂದ್ (26), ಕುಮಾರ್ ಪ್ರಭಾತ್ (35), ಜಾರ್ಖಂಡ್ನ ಗೋವಿಂದ್ ಕಂಡೆಯಂಗ್ (32), ಶಿಡ್ಲಘಟ್ಟ ತಾಲ್ಲೂಕಿನ ರಮೇಶ್ ಗೌಡ (26) ಹಾಗೂ ನಾಗೇಶ್ (24) ಬಂಧಿತರು.
ಆರೋಪಿಗಳು ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ₹ 7.5 ಲಕ್ಷ ಬೆಲೆಬಾಳುವ 40 ಕೆ.ಜಿ.ಗಾಂಜಾ ಸೊಪ್ಪನ್ನು ಜಪ್ತಿ ಮಾಡಿದ್ದಾರೆ.
ಆಫ್ರಿಕನ್ ಪ್ರಜೆಗಳ ಬಂಧನ: ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಜ್ಜಾಗಿದ್ದ ಇಬ್ಬರು ಆಫ್ರಿಕನ್ ಪ್ರಜೆಗಳನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾದ ಎಡೊಕಿ ಜೇಮ್ಸ್ (25) ಹಾಗೂ ಅಗುಂಟಾ ಚುಕ್ವೇಮೆಕಾ ಡೇನಿಯಲ್ (24) ಬಂಧಿತರು.
‘ಬೈರತಿ ಬಂಡೆಯ ಬಸ್ ನಿಲ್ದಾಣದ ಬಳಿಗೆ ಬೈಕ್ನಲ್ಲಿ ಬಂದಿದ್ದ ಆರೋಪಿಗಳು ಮಾದಕ ವಸ್ತುಗಳನ್ನು ಇಟ್ಟುಕೊಂಡು ಗ್ರಾಹಕರಿಗಾಗಿ ಕಾಯುತ್ತಿದ್ದರು. ಈ ವೇಳೆ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು. ಇವರ ಬಳಿಯಿದ್ದ ₹2.5 ಲಕ್ಷ ಬೆಲೆ ಬಾಳುವ ಮಾದಕ ವಸ್ತುಗಳಾದ ಮೆಥಾಕೋಲಿನ್ ಹಾಗೂ ಕೊಕೇನ್ ಜಪ್ತಿ ಮಾಡಲಾಯಿತು’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.