ADVERTISEMENT

ರಸ್ತೆ ಬದಿ ಕಸ: ಪ್ರಶ್ನಿಸಿದ ಸಿಬ್ಬಂದಿಗೆ ನಿಂದನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2019, 20:17 IST
Last Updated 3 ಅಕ್ಟೋಬರ್ 2019, 20:17 IST
ರಸ್ತೆ ಬದಿಯಲ್ಲಿ ಕಸ ಎಸೆದಿರುವುದು– ಸಾಂದರ್ಭಿಕ ಚಿತ್ರ
ರಸ್ತೆ ಬದಿಯಲ್ಲಿ ಕಸ ಎಸೆದಿರುವುದು– ಸಾಂದರ್ಭಿಕ ಚಿತ್ರ   

ಬೆಂಗಳೂರು: ರಸ್ತೆ ಪಕ್ಕದಲ್ಲಿ ಕಸ ಬಿಸಾಕಿದ್ದನ್ನು ಪ್ರಶ್ನಿಸುವ ಜೊತೆಗೆ ದಂಡ ಪಾವತಿಸುವಂತೆ ಕೇಳಿದ್ದಕ್ಕೆ ಸಾರ್ವಜನಿಕರು ಬಿಬಿಎಂಪಿ ಆರೋಗ್ಯ ಅಧಿಕಾರಿ, ಮಾರ್ಷಲ್‌ ಮತ್ತು ಸಿಬ್ಬಂದಿಯನ್ನು ನಿಂದಿಸಿದ್ದಾರೆ.

ವಾರ್ಡ್‌ ನಂ. 45ರಲ್ಲಿ ಹರಿಶ್ಚಂದ್ರಘಾಟ್‌ ಬಳಿ ಮಹಾಕವಿ ಕಾಳಿದಾಸ ರಸ್ತೆ ಬಳಿ ಮಾರ್ಷಲ್‌ ಆಗಿ ಕೆಲಸ ಮಾಡುತ್ತಿರುವ ಬಸವರಾಜ್ ಸೆ. 29ರಂದು ರಾತ್ರಿ 9.45ರಲ್ಲಿ ರಸ್ತೆ ಪಕ್ಕದಲ್ಲಿ ಸ್ಥಳೀಯರು ಕಸ ಎಸೆಯುತ್ತಿರುವುದನ್ನು ಪ್ರಶ್ನಿಸಿದ್ದರು.

ಇದರಿಂದ ಕೆರಳಿದ ಆ ವ್ಯಕ್ತಿ, ಬಸವರಾಜ್ ಮೇಲೆ ಹಲ್ಲೆ ಮಾಡಿದ್ದರು. ಅಧಿಕಾರಿ ಈ ಸಂಬಂಧ ಸುಬ್ರಮಣ್ಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ADVERTISEMENT

ಇನ್ನೊಂದು ಪ್ರಕರಣದಲ್ಲಿ ರಸ್ತೆ ಬದಿಯಲ್ಲಿ ಕಸ ಹಾಕುತ್ತಿದ್ದವರಿಗೆ ದಂಡಹಾಕಲು ಮುಂದಾದ ಜೆಸಿ ನಗರ ಉಪ ವಿಭಾಗದ ಹಿರಿಯ ಆರೋಗ್ಯ ನಿರೀಕ್ಷಕಿ ಅನೀಶಾ ಫಾತಿಮಾ (34) ಅವರನ್ನು ರಹಮತ್‌ ನಗರದ ವ್ಯಕ್ತಿಯೊಬ್ಬರು ನಿಂದಿಸಿದ್ದಾರೆ.

ಅಲ್ಲದೆ, ನಂತರ ಅಲ್ಲಿಗೆ ಬಂದ 10ರಿಂದ 15 ಜನರಿದ್ದ ಗುಂಪು, ಫಾತಿಮಾ ಅವರನ್ನು ಅವಾಚ್ಯವಾಗಿ ನಿಂದಿಸಿದ ಬಗ್ಗೆ ಆರ್‌.ಟಿ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.