ದೀಪಾವಳಿ ಹಬ್ಬದ ಪ್ರಯುಕ್ತ ಬಿ-ಪ್ಯಾಕ್ ವತಿಯಿಂದ ಪೌರಕಾರ್ಮಿಕರಿಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಶುಕ್ರವಾರ ಸಿಹಿ ತಿನಿಸು ವಿತರಿಸಿದರು.
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಬಿ-ಪ್ಯಾಕ್ ವತಿಯಿಂದ ಪೌರಕಾರ್ಮಿಕರಿಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಶುಕ್ರವಾರ ಸಿಹಿ ವಿತರಿಸಿದರು.
ಪೌರಕಾರ್ಮಿಕರ ಶ್ರಮವನ್ನು ಗುರುತಿಸಿ ಬಿ-ಪ್ಯಾಕ್ ಸಂಸ್ಥೆಯು ಸತತ 5 ವರ್ಷಗಳಿಂದ ಸಿಹಿ ವಿತರಿಸುತ್ತಿದೆ. ಈ ವರ್ಷ ನಗರದ ಸುಮಾರು 28,000 ಪೌರಕಾರ್ಮಿಕರಿಗೆ ಸಿಹಿ ತಿನಿಸು ನೀಡಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದರು.
ಬಿ-ಪ್ಯಾಕ್ ಸಿವಿಕ್ ಪ್ರತಿನಿಧಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.