ಬೆಂಗಳೂರು: ಮಂಡ್ಯದ ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ ನೀಡುವ ‘ನಿನ್ನೊಲುಮೆಯಿಂದಲೆ’ ಕವಿ ಪತ್ನಿ ಪುರಸ್ಕಾರಕ್ಕೆಗಿರಿಜಾ ಲಕ್ಷ್ಮಣರಾವ್ ಹಾಗೂ ಸಮತಾ ಪಾತ್ರೋಟ ಆಯ್ಕೆಯಾಗಿದ್ದಾರೆ.
ಕಾವ್ಯ ನಿರ್ವಾಣಕ್ಕೆ ಬಾಳಿನುದ್ದಕ್ಕೂ ಸಹಕರಿಸಿದ ಕವಿ ಪತ್ನಿಗೆ ಈ ಪುರಸ್ಕಾರ ನೀಡಲಾಗುತ್ತಿದೆ.ಗಿರಿಜಾ ಅವರು ಕವಿ ಬಿ.ಆರ್. ಲಕ್ಷ್ಮಣರಾವ್, ಸಮತಾ ಅವರು ಕವಿ ಸತ್ಯಾನಂದ ಪಾತ್ರೋಟ ಅವರ ಪತ್ನಿಯಾಗಿದ್ದಾರೆ.
ಡಿ.10ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಗಾಂಧಿನಗರದಲ್ಲಿರುವ ಸಿಎಂಎಸ್ ಬಿಸಿನೆಸ್ ಸ್ಕೂಲ್ನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.