ADVERTISEMENT

ಬಾಲಕಿ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 20:20 IST
Last Updated 1 ಅಕ್ಟೋಬರ್ 2020, 20:20 IST

ಬೆಂಗಳೂರು: ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಿಂದ ಸೆ. 18ರಂದು ಅಪಹರಣವಾಗಿದ್ದ ಐದು ವರ್ಷದ ಬಾಲಕಿಯನ್ನು ತಮಿಳುನಾಡಿನ ಕನ್ಯಾಕುಮಾರಿ ಪೊಲೀಸರು ರಕ್ಷಿಸಿದ್ದು, ಆಕೆಯನ್ನು ಅಪಹರಣ ಮಾಡಿದ್ದ ದಂಪತಿಯನ್ನು ಬಂಧಿಸಿ ನಗರದ ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಸತ್ಯಮೂರ್ತಿ ಮತ್ತು ಕಾರ್ತಿಕೇಶ್ವರಿ ದಂಪತಿ ಪುತ್ರಿ ಲೋಕಿತಾಳನ್ನು ಆರೋಪಿಗಳು ಅಪಹರಿಸಿದ್ದರು. ಈ ಸಂಬಂಧ ಬಾಲಕಿಯ ಅಜ್ಜ ವಿಜಯಕುಮಾರ್ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಾಲಕಿಯನ್ನು ಪೋಷಕರ ಸುಪರ್ದಿಗೆ ನೀಡಲಾಗಿದೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT