ADVERTISEMENT

ಜನಸಂದಣಿಯಲ್ಲಿ ಬ್ಯಾಗ್‌ಗೆ ಬ್ಲೇಡ್: ₹ 3.57 ಲಕ್ಷ ಕಳವು

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 14:03 IST
Last Updated 17 ಜನವರಿ 2022, 14:03 IST

ಬೆಂಗಳೂರು: ಜನಸಂದಣಿಯಲ್ಲಿ ಹೊರಟಿದ್ದ ಆಭರಣ ವ್ಯಾಪಾರಿಯೊಬ್ಬರ ಬ್ಯಾಗ್‌ ಅನ್ನು ಬ್ಲೇಡ್‌ನಿಂದ ಕತ್ತರಿಸಿ ₹ 3.57 ಲಕ್ಷ ನಗದು ಹಾಗೂ 28 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದ್ದು, ಈ ಬಗ್ಗೆ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಗರದ ಎಸ್‌.ಪಿ ರಸ್ತೆಯಲ್ಲಿ ನಡೆದಿರುವ ಕಳ್ಳತನದ ಬಗ್ಗೆ ಚಿಕ್ಕಬಳ್ಳಾಪುರ ನಿವಾಸಿ ಮೆಹರಾಮ್ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ಘಟನಾ ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಚಿಕ್ಕಬಳ್ಳಾಪುರದಲ್ಲಿ ಆಭರಣ ಮಳಿಗೆ ಇಟ್ಟುಕೊಂಡಿರುವ ಮೆಹರಾಮ್, ಚಿನ್ನದ ಗಟ್ಟಿಗಳನ್ನು ಖರೀದಿಸಲು ನಗರಕ್ಕೆ ಬಂದಿದ್ದರು. ಪರಿಚಯಸ್ಥರ ಆಭರಣ ಅಂಗಡಿಯತ್ತ ಹೊರಟಿದ್ದರು. ರಸ್ತೆಯಲ್ಲಿ ಜನಸಂದಣಿ ಇತ್ತು. ಅದೇ ಸಂದರ್ಭ ದುಷ್ಕರ್ಮಿಗಳು, ಬ್ಲೇಡ್‌ನಿಂದ ಬ್ಯಾಗ್‌ ಕತ್ತರಿಸಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿರುವುದು ಗೊತ್ತಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.