ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಹೋಟೆಲ್ ಮಾಲೀಕರ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಪುರದ ಅಮರಜ್ಯೋತಿ ನಗರದಲ್ಲಿ ವಾಸವಿದ್ದ ಅನು (45) ಹಾಗೂ ಕಲಬುರ್ಗಿಯ ರೇಣುಕಾನಂದ (31) ಬಂಧಿತರು.
‘ಆರೋಪಿ ಅನು ಕೆ.ಪಿ.ಅಗ್ರಹಾರದ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮಾಲೀಕರ ಮನೆಗೆ ಹೋಗಿದ್ದಾಗ ಅವರಿಗೆ ಗೊತ್ತಾಗದಂತೆ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದಳು. ಬಳಿಕ ತನ್ನ ಸ್ನೇಹಿತರೇಣುಕಾನಂದನಿಗೆ ಚಿನ್ನ ನೀಡಿದ್ದಳು. ಆರೋಪಿ ರೇಣುಕಾನಂದ ಕದ್ದ ಚಿನ್ನ ಚಿನ್ನವನ್ನು ಮಾರಾಟ ಮಾಡಿದ್ದ’ ಎಂದು ಪೊಲೀಸರು ತಿಳಿಸಿದರು.
‘ಆರೋಪಿಗಳಿಂದ ₹1.40 ಲಕ್ಷ ಬೆಲೆಬಾಳುವ 45 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.