ADVERTISEMENT

ಸರ್ಕಾರಿ ಕೆಲಸದ ಆಮಿಷವೊಡ್ಡಿ ₹ 1.02 ಕೋಟಿ ವಂಚನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 20:13 IST
Last Updated 20 ಜೂನ್ 2022, 20:13 IST
   

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವ ಆಮಿಷವೊಡ್ಡಿ ನಗರದ ವ್ಯಾಪಾರಿಯೊಬ್ಬರಿಂದ ₹ 1.02 ಕೋಟಿ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸಹಕಾರ ನಗರದ ನಿವಾಸಿಯಾದ ವ್ಯಾಪಾರಿ ನಾಗೇಂದ್ರ ರಾವ್ ಅವರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಬಳ್ಳಾರಿ ಜಿಲ್ಲೆಯ ಜಿ.ಎಸ್. ವೆಂಕಟರೆಡ್ಡಿ ಹಾಗೂ ಧಾರವಾಡ ಜಿಲ್ಲೆಯ ಜಿ.ಎಸ್. ಬಸನಗೌಡ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ದೂರುದಾರ ನಾಗೇಂದ್ರ ಅವರು ತಮ್ಮ ಸಂಬಂಧಿಕರಿಬ್ಬರಿಗೆ ಕೆಲಸ ಕೊಡಿಸುವುದಕ್ಕಾಗಿ ಆರೋಪಿಗಳಿಗೆ ಹಣ ನೀಡಿದ್ದರು. ಆದರೆ, ಆರೋಪಿಗಳು ಕೆಲಸ ಕೊಡಿಸಿಲ್ಲ. ಹಣವನ್ನೂ ವಾಪಸು ನೀಡದೇ ನಾಪತ್ತೆಯಾಗಿದ್ದಾರೆ’ ಎಂದೂ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.