ADVERTISEMENT

‘ಗ್ರಾ,ಪಂ. ಚುನಾವಣೆ: ಸರ್ಕಾರ ನಿಲುವು ಬದಲಿಸದಿದ್ದರೆ ಹೋರಾಟ’

​ಪ್ರಜಾವಾಣಿ ವಾರ್ತೆ
Published 21 ಮೇ 2020, 5:50 IST
Last Updated 21 ಮೇ 2020, 5:50 IST
ಗ್ರಾಮ ಪಂಚಾಯಿತಿ ಚುನಾವಣೆ
ಗ್ರಾಮ ಪಂಚಾಯಿತಿ ಚುನಾವಣೆ   

ಬೆಂಗಳೂರು: ‘ಕೊರೊನಾ ಕಾರಣಕ್ಕೆ ಗ್ರಾಮ ಪಂಚಾಯಿತಿಗಳಿಗೆ ತಕ್ಷಣ ಚುನಾವಣೆ ನಡೆಸಲು ಸಾಧ್ಯವಿಲ್ಲದಿದ್ದರೆ, ಪ್ರಸ್ತುತ ಇರುವ ‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌ವ್ಯವಸ್ಥೆಯನ್ನೇ ಮುಂದುವರಿಸಬೇಕು. ಇಲ್ಲವಾದರೆ, ಸ್ಥಳೀಯ ಸರ್ಕಾರಗಳ ಉಳಿವಿಗೆ ರಾಜ್ಯದಾದ್ಯಂತ ಹೋರಾಟ ಅನಿವಾರ್ಯ’ ಎಂದು ‘ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ’ ಎಚ್ಚರಿಸಿದೆ. ‘ಚುನಾವಣೆ ಬದಲು ಆಡಳಿತ ಸಮಿತಿ ನೇಮಿಸಲು ಸರ್ಕಾರ ನಿರ್ಧರಿಸಿದೆ. ಇದು ಸಂವಿಧಾನದ ಆಶಯಕ್ಕೆ ವಿರುದ್ಧ. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ ಉಲ್ಲಂಘನೆ’ ಎಂದು ಆಂದೋಲನ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.