ಬೆಂಗಳೂರು: ಬಿಎಂಟಿಸಿ ನೌಕರರ ಭವಿಷ್ಯ ನಿಧಿ ಸೇರಿದಂತೆ ಬಾಕಿ ಪಾವತಿಗೆ ₹200 ಕೋಟಿ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ.
‘ಭವಿಷ್ಯನಿಧಿ, ಉಪಧನ, ನಿವೃತ್ತ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ಮರುಪಾವತಿ, ಸಂಸ್ಥೆಗೆ ಸರಕು ಪೂರೈಕೆ ಮಾಡಿದವರ ಬಾಕಿ ಬಿಲ್ಗಳನ್ನು ಪಾವತಿಸಲು ಹಣ ಬಿಡುಗಡೆ ಮಾಡಲಾಗಿದೆ’ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.