ADVERTISEMENT

ಹಸಿರು ಪಟಾಕಿ ಬಳಕೆ: ಮಾರ್ಗಸೂಚಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 19:02 IST
Last Updated 7 ನವೆಂಬರ್ 2020, 19:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಸುಪ್ರೀಂ ಕೋರ್ಟ್‌ ನೀಡಿದ ಆದೇಶದಂತೆ ದೀಪಾವಳಿ ಸಂದರ್ಭದಲ್ಲಿ ‘ಹಸಿರು ಪಟಾಕಿ’ಗಳನ್ನು ಮಾತ್ರ ಹಚ್ಚಬೇಕು ಎಂದು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಹಸಿರು ಪಟಾಕಿ ಮಾರಾಟ ಮಾಡಬಹುದು. ನ. 7ರಿಂದ 11ರವರೆಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ಮಾರ್ಗ
ಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸಂಬಂಧಪಟ್ಟ ಇಲಾಖೆ ನಿಗದಿ ಪ‍ಡಿಸಿದ ಸ್ಥಳದಲ್ಲಿ ಮತ್ತು ದಿನಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ಮಳಿಗೆಗಳನ್ನು ತೆರೆದು ಹಸಿರು ಪಟಾಕಿ ಮಾರಾಟ ಮಾಡಬೇಕು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನಗಳಲ್ಲಿ ಅಥವಾ ಬಯಲು ಪ್ರದೇಶಗಳಲ್ಲಿ ಮಳಿಗೆ ತೆರೆಯಲು ಅನುಮತಿ ಪಡೆಯಬೇಕು. ಎರಡು ಪಟಾಕಿ ಮಾರಾಟ ಮಳಿಗೆಗಳ ಮಧ್ಯೆ 6 ಮೀಟರ್‌ ಅಂತರ ಇರಬೇಕು ಮತ್ತು ಗಾಳಿಯಾಡುವಂತೆ ಇರಬೇಕು. ಪರವಾನಗಿಯನ್ನು ಸಾರ್ವಜನಿಕ ರಿಗೆ ಕಾಣುವಂತೆ ಮಳಿಗೆಯಲ್ಲಿ ಪ್ರದರ್ಶಿ ಸಬೇಕು. ಮಳಿಗೆಗಳ ಸುತ್ತ ನಿತ್ಯ ಸ್ಯಾನಿಟೈಸ್‌ ಮಾಡಬೇಕು. ಪಟಾಕಿ ಖರೀದಿಗೆ ಬರುವ ಗ್ರಾಹಕರಿಗೆ ಕನಿಷ್ಠ 6 ಅಡಿ ಅಂತರ ಗುರುತಿಸಬೇಕು ಎಂದೂ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.