ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗಾಲಯಗಳು ವ್ಯಕ್ತಿಯ ಲಕ್ಷಣಗಳನ್ನು ಆಧರಿಸಿ, ವಿವಿಧ ವಿಧಾನಗಳಲ್ಲಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.
ಈ ಸಂಬಂಧಆರೋಗ್ಯ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.ಸೋಂಕು ಲಕ್ಷಣಗಳನ್ನು ಹೊಂದಿರುವವರು ಹಾಗೂ ಸೋಂಕಿತರ ನೇರ ಸಂಪರ್ಕ ಹೊಂದಿರುವವರು ಎ ವರ್ಗದಲ್ಲಿ ಬರಲಿದ್ದು, ಅವರ ವೈಯಕ್ತಿಕ ಪರೀಕ್ಷೆ ನಡೆಸಬೇಕು. ಪ್ರತಿ ಮಾದರಿಯನ್ನೂ ಪ್ರತ್ಯೇಕವಾಗಿ ಪರೀಕ್ಷೆಗೆ ಒಳಪಡಿಸಬೇಕು. ರೋಗ ಲಕ್ಷಣ ಗೋಚರಿಸದವರಿಗೆ, ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹಾಗೂ ಇತರ ವರ್ಗದವರಿಗೆ ಗುಂಪು ಮಾದರಿಯ ಪರೀಕ್ಷಾ ವಿಧಾನವನ್ನು ಅನುಸರಿಸಬೇಕು ಎಂದು ಸೂಚಿಸಿದ್ದಾರೆ.
ಯಾವುದೇ ವ್ಯಕ್ತಿ ಮೃತಪಟ್ಟಲ್ಲಿ ಹೆಚ್ಚಿನ ಆದ್ಯತೆ ನೀಡಿ, ಪರೀಕ್ಷೆ ನಡೆಸಬೇಕು. ಆದಷ್ಟು ಬೇಗ ವರದಿಯನ್ನು ನೀಡಬೇಕು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.