ADVERTISEMENT

ಹುಡುಗಿ ಕೈ ಕೊಟ್ಟಿದ್ದಕ್ಕೆ ಜಿಮ್ ತರಬೇತುದಾರ ಆತ್ಮಹತ್ಯೆ?

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2021, 20:44 IST
Last Updated 24 ಅಕ್ಟೋಬರ್ 2021, 20:44 IST
   

ಬೆಂಗಳೂರು: ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯ ಮಾರಪ್ಪ ಬಡಾವಣೆಯಲ್ಲಿ ಕಾರ್ತಿಕ್ (29) ಎಂಬುವರು ನೇಣು ಹಾಕಿಕೊಂಡು ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

'ಕಾರ್ತಿಕ್, ಜಿಮ್ ತರಬೇತುದಾರ. ಶನಿವಾರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

'ಆತ್ಮಹತ್ಯೆಗೂ ಮುನ್ನ ಕಾರ್ತಿಕ್ ಚಿತ್ರೀಕರಿಸಿದ್ದಾರೆ ಎನ್ನಲಾದ ವಿಡಿಯೊ ಸಿಕ್ಕಿದೆ. ಅದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಯುವತಿಯೊಬ್ಬರನ್ನು ಕಾರ್ತಿಕ್ ಪ್ರೀತಿಸುತ್ತಿದ್ದು, ಮದುವೆಗೂ ಸಿದ್ಧರಾಗಿದ್ದರು. ಆದರೆ, ಇತ್ತೀಚೆಗೆ ಯುವತಿ ದೂರವಾಗಿದ್ದರು ಎಂದು ಗೊತ್ತಾಗಿದೆ. ಅದರಿಂದ ನೊಂದ ಕಾರ್ತಿಕ್, ಆತ್ಮಹತ್ಯೆಗೆ ಶರಣಾಗಿರುವ ಮಾಹಿತಿ ಇದೆ. ’

ADVERTISEMENT

‘ಬೇರೆ ಯುವತಿ ಜೊತೆ ಮದುವೆ ಮಾಡಲು ತೀರ್ಮಾನಿಸಿದ್ದ ಪೋಷಕರು, ಭಾನುವಾರ ಹೆಣ್ಣು ನೋಡಲು ಹೊರಟಿದ್ದರು. ಇದಕ್ಕೂ ಮುನ್ನವೇ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.