ADVERTISEMENT

ಆರೆಸ್ಸೆಸ್‌ನವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ: ಎಚ್‌. ವಿಶ್ವನಾಥ್‌

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 19:49 IST
Last Updated 27 ಜುಲೈ 2022, 19:49 IST
ಬಿಜೆಪಿ ಸದಸ್ಯ ಎಚ್‌. ವಿಶ್ವನಾಥ್‌
ಬಿಜೆಪಿ ಸದಸ್ಯ ಎಚ್‌. ವಿಶ್ವನಾಥ್‌   

‌ಬೆಂಗಳೂರು: ‘ಆರ್‌ಎಸ್‌ಎಸ್‌, ಬಜರಂಗದಳದವರು ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ. ನಾವೂ ಹಾಗೆಯೇ ಮಾತನಾಡುತ್ತಿದ್ದೇವೆ. ಯಾವುದೇ ಪುರುಷಾರ್ಥಕ್ಕೂ ಇಲ್ಲದಂತೆ ಹತ್ಯೆಗಳು ನಡೆಯುತ್ತಿವೆ’ ಎಂದು ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎಚ್‌. ವಿಶ್ವನಾಥ್‌ ಹೇಳಿದರು.

ಬುಧವಾರ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿರುವುದು ದುರದೃಷ್ಟಕರ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೆಕು’ ಎಂದರು. ಕಾಸು ಕೊಟ್ಟು ಬಂದವರು ಕೆಲಸ ಎಲ್ಲಿ ಮಾಡುತ್ತಾರೆ ಎಂದು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT